ಕಾಲ್ತುಳಿತದ ಬೆನ್ನಲ್ಲೇ ಎಚ್ಚೆತ್ತ ಬಿಸಿಸಿಐ : ಸಂಭ್ರಮಾಚರಣೆಗೆ ಶೀಘ್ರ ನಿಯಮ ಜಾರಿ

| N/A | Published : Jun 12 2025, 12:15 PM IST

BCCI Logo

ಸಾರಾಂಶ

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್‌ಸಿಬಿ ಸಂಭ್ರಮಾಚರಣೆಗೆ ವೇಳೆ ನಡೆದ ಕಾಲ್ತುಳಿತ ಘಟನೆಯಿಂದ ಬಿಸಿಸಿಐ ಎಚ್ಚೆತ್ತಿದೆ.

ನವದೆಹಲಿ: ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್‌ಸಿಬಿ ಸಂಭ್ರಮಾಚರಣೆಗೆ ವೇಳೆ ನಡೆದ ಕಾಲ್ತುಳಿತ ಘಟನೆಯಿಂದ ಬಿಸಿಸಿಐ ಎಚ್ಚೆತ್ತಿದೆ. ಭವಿಷ್ಯದಲ್ಲಿ ಈ ರೀತಿ ಘಟನೆ ಸಂಭವಿಸದಿರಲು ಶೀಘ್ರದಲ್ಲೇ ಹೊಸ ನಿಯಮಗಳನ್ನು ಜಾರಿಗೊಳಿಸಲಿದೆ.

ಶನಿವಾರ(ಜೂ.14) ಬಿಸಿಸಿಐ 28ನೇ ಅಪೆಕ್ಸ್‌ ಕೌನ್ಸಿಲ್‌ ಸಭೆ ನಡೆಯಲಿದ್ದು, ಇದರ ಅಜೆಂಡಾದಲ್ಲಿ ಸಂಭ್ರಮಾಚರಣೆಗೆ ನಿಯಮ ಜಾರಿಗೊಳಿಸುವ ಬಗ್ಗೆ ಉಲ್ಲೇಖವಿದೆ. ‘ಐಪಿಎಲ್‌ ಸಂಭ್ರಮಾಚರಣೆಗೆ ಕೆಲ ನಿಯಮಗಳನ್ನು ಜಾರಿಗೊಳಿಸಬೇಕಾದ ಅಗತ್ಯವಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದೇವೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಅಲ್ಲದೆ, ಭಾರತ-ನ್ಯೂಜಿಲೆಂಡ್‌ ಸರಣಿಗೆ ಸ್ಥಳ ನಿಗದಿ, ವಯೋ ವಂಚನೆ ತಡೆಗೆ ನಿಯಮಗಳು ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

Read more Articles on